ಬೆಂಗಳೂರು: ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ಒಂದು ಲಕ್ಷ ರು. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಇಇ ಮತ್ತು ಅಕೌಂಟೆಂಟ್ ಅನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟಿ ಲೋಕೋಪಯೋಗಿ ಇಲಾಖೆಯಲ್ಲಿ ನಡೆದ ದಾಳಿಯಲ್ಲಿ ಇಇ ದೇವದಾಸ್ ಹಾಗೂ ಅಕೌಂಟೆಂಟ್ ಮಾರತಿ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಬಮಧಿಸಿದ್ದಾರೆ.
ಹೂವಿನ ಹಡಗಲಿ ಗ್ರಾಮದ ಮಹಲೇಶ್ ಹಲಗೇರಿ ಎಂಬುವವರು ನೀಡಿದ ದೂರಿನ ಮೇರೆಗೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಇಇ ದೇವದಾಸ್ ಮತ್ತು ಅಕೌಂಟೆಂಟ್ ಒಬ್ಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

