ಅಪರಾಧ ಸುದ್ದಿ

ಮಂಗಳೂರು ಹತ್ಯೆ ಪ್ರಕರಣ: ಮತ್ತೇ ಐವರ ಬಂಧನ, ಕೊಲೆಯಾದವನ ಗುರುತುಪತ್ತೆ

Share It

ಮಂಗಳೂರು: ನಗರದ ಕುಡುಪುವಿನ ಭಟ್ರಕಲ್ಲುರ್ಟಿ ದೈವಸ್ಥಾನದ ಬಳಿ ನಡೆದ ಗುಂಪಿನಿಂದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ ಐವರನ್ನು ಬಂಧಿಸಿದ್ದಾರೆ.

ಈ ಮೂಲಕ ಬಂಧಿತರ ಸಂಖ್ಯೆ 20ಕ್ಕೆ ಏರಿದೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್ ಹಾಗೂ ಆದರ್ಶ್ ಬಂಧಿತ ಐವರು ಆರೋಪಿಗಳು. ಕೇರಳದ ವಯನಾಡು ಜಿಲ್ಲೆಯ ಪುಲ್ಪಳ್ಳಿ ನಿವಾಸಿ ಅಶ್ರಫ್ ಹತ್ಯೆಗೀಡಾದ ವ್ಯಕ್ತಿ. ಈತನ ಮನೆಯವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಂದಿಯ ಬಂಧನ ಆಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಕೊಲೆ ಪ್ರಕರಣಕ್ಕೆ ಸಂಬಂಧಿಸಿ (ಅಪರಾಧ ಸಂಖ್ಯೆ 37/2025, ಯು/ಎಸ್ 302 ಐಪಿಸಿ), ಇನ್ನೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಜೊತೆಗೆ, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 20ಕ್ಕೆ ಏರಿದೆ. ಇದಲ್ಲದೆ, ಕೊಲೆಯಾದ ವ್ಯಕ್ತಿಯನ್ನು ಅಶ್ರಫ್ ಎಂದು ಗುರುತಿಸಲಾಗಿದೆ ಎಂದು ಹೇಳಿದರು.


Share It

You cannot copy content of this page