ಸುದ್ದಿ

Mysuru Dasara: ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಕೋರ್ಟ್ಗೆ ಮತ್ತೆರಡು ಅರ್ಜಿ

Share It

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇರಿರುವುದರ ಬೆನ್ನಲ್ಲೇ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆರಡು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿವೆ.

ಹಿಂದೂ ಅಲ್ಲದ ಬಾನು ಮುಷ್ತಾಕ್‌ರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವ ನಿರ್ಧಾರ ವಾಪಸ್ ಪಡೆಯಲು ಸರಕಾರಕ್ಕೆ ನಿರ್ದೇಶನ ನೀಡಬೇಕು. ಅದೇ ರೀತಿ ದಸರಾ ಉದ್ಘಾಟನೆಯು ಹಿಂದೂ ಧಾರ್ಮಿಕ ಸಂಪ್ರದಾಯದ ಅವಿಭಾಜ್ಯ ಭಾಗವೆಂದು ಘೋಷಿಸಿ ಅದನ್ನು ಹಿಂದೂ ಗಣ್ಯರಿಂದ ಉದ್ಘಾಟಿಸಬೇಕು. ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ ಹಿಂದೂ ಆಗಮಿಕ ಪದ್ಧತಿ ಪ್ರಕಾರವೇ ಕಟ್ಟುನಿಟ್ಟಾಗಿ ದಸರಾ ಉದ್ಘಾಟನೆ ನೆರವೇರಿಸಲು ನಿರ್ದೇಶನ ನೀಡಬೇಕು ಎಂದು ಬೆಂಗಳೂರಿನ ನಿವಾಸಿ ಎಚ್.ಎಸ್.ಗೌರವ್ ಕೋರಿದ್ದಾರೆ.

ಬೆಂಗಳೂರಿನ ಉದ್ಯಮಿ ಟಿ.ಗಿರೀಶ್ ಕುಮಾರ್ ಹಾಗೂ ಅಭಿನವ ಭಾರತ್ ಪಾರ್ಟಿಯ ರಾಷ್ಟ್ರೀಯ ಉಪಾಧ್ಯಕ್ಷೆ ಆರ್.ಸೌಮ್ಯ ಕೂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಎರಡೂ ಅರ್ಜಿಗಳು ವಿಚಾರಣೆಗೆ ಬರಬೇಕಿದೆ. ಈವರೆಗೆ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಒಟ್ಟು 3 ಅರ್ಜಿಗಳು ಸಲ್ಲಿಕೆಯಾಗಿವೆ.


Share It

You cannot copy content of this page