ಮಂಡ್ಯದಲ್ಲಿ ಕಬ್ಬಡಿ ಗ್ಯಾಲರಿ ಕುಸಿದು ಒಬ್ಬ ಸಾವು 10 ಜನರಿಗೆ ಗಾಯ

Share It

ಮಂಡ್ಯ: ಕಬ್ಬಡಿ ಪಂದ್ಯಾವಳಿಯ ವೇಳೆ ಪ್ರೇಕ್ಷಕರ ಗ್ಯಾಲರಿಯ ಒಂದು ಭಾಗ ಕುಸಿದುಬಿದ್ದಿದ್ದು, ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು 50 ವರ್ಷದ ಪಾಪಣ್ಣಚಾರಿ ಎಂದು ಗುರುತಿಸಲಾಗಿದ್ದು, ಗಾಯಾಳುಗಳಲ್ಲಿ 10 ಮಂದಿ ಮೂಳೆ ಮುರಿತ ಮತ್ತು ಸಣ್ಣಪುಟ್ಟ ಗಾಯಗಳೊಂದಿಗೆ ಮಂಡ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೀಡೆಯ ಉತ್ತೇಜನಕ್ಕಾಗಿ ಮಂಡ್ಯ ಜಿಲ್ಲೆಯ ಮೇಲುಕೋಟೆ ತಾಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದ ಹಿರಿಯ ಕಬ್ಬಡ್ಡಿ ಆಟಗಾರರು ಪಂದ್ಯಾವಳಿಯನ್ನು ಆಯೋಜನೆ ಮಾಡಿದ್ದರು. ಅಂಡರ್-23 ಮೈಸೂರು ವಿಭಾಗದ ಶ್ರೀ ಭೈರವ ಕಪ್-2025ರ ಮೂರನೇ ಪಂದ್ಯದ ಸಮಯದಲ್ಲಿ ಈ ಘಟನೆ ಸಂಬಂಧಿಸಿದ್ದು, ಘಟನೆಯ ನಂತರ ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಪಂದ್ಯಾವಳಿಗೆ ಮೈಸೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಜಿಲ್ಲೆಗಳಿಂದ 40ಕ್ಕೂ ಹೆಚ್ಚು ತಂಡಗಳು ಆಗಮಿಸಿದ್ದರು. ಗ್ಯಾಲರಿಯ ಮೇಲೆ 150ಕ್ಕೂ ಹೆಚ್ಚು ಜನರು ಕುಳಿತಿದ್ದು, ಇದ್ದಕ್ಕಿದ್ದಂತೆ ಕುಸಿಯಿತು. ಈ ವೇಳೆ ಅನೇಕರು ಅವಶೇಷಗಳಡಿ ಸಿಲುಕಿದ್ದರು. ನಂತರ ಅವರನ್ನು ರಕ್ಷಿಸಿ, ಆಸ್ಪತ್ರೆಗೆ ಸೇರಿಸಲಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


Share It

You May Have Missed

You cannot copy content of this page