ಅಪರಾಧ ರಾಜಕೀಯ ಸುದ್ದಿ

ಫೋನ್ ಕದ್ದಾಲಿಕೆ ಆರೋಪ: ಯಾರೂ ದೂರು ಕೊಟ್ಟಿಲ್ಲ: ಡಾ.ಜಿ ಪರಮೇಶ್ವರ್

Share It

ಬೆಂಗಳೂರು: ಸಚಿವರು, ಶಾಸಕರ ಫೋನ್ ಕದ್ದಾಲಿಕೆಯಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದಿದ್ದಾರೆ.

ನನ್ನದು ಸೇರಿ ವಿಪಕ್ಷ ನಾಯಕರು ಸೇರಿ ಸಚಿವರದ್ದೂ ಫೋನ್ ಕದ್ದಾಲಿಕೆಯಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್, ನಮಗೆ ಈ ಸಂಬಂಧ ಯಾವುದೇ ದೂರುಗಳು ಬಂದಿಲ್ಲ ಎಂದಿದ್ದಾರೆ.

ಪೋನ್ ಕದ್ದಾಲಿಕೆಯಾಗಿದೆ ಎಂಬ ಆರೋಪವನ್ನು ಬರೀ ರಾಜಕೀಯ ಕಾರಣಕ್ಕೆ ಮಾಡುತ್ತಿರಬಹುದು. ಒಂದು ವೇಳೆ ಕದ್ದಾಲಿಕೆಯಾಗಿದ್ದರೆ, ತನಿಖೆ ನಡೆಸಲು ಪೊಲೀಸ್ ಇಲಾಖೆ ಸಿದ್ಧವಿದೆ. ಆದರೆ, ಈವರೆಗೆ ಅಂತಹ ಯಾವುದೇ ದೂರುಗಳು ಬಂದಿಲ್ಲ ಎಂದು ಗೃಹಸಚಿವರು ತಿಳಿಸಿದ್ದಾರೆ.


Share It

You cannot copy content of this page