ರಾಜಕೀಯ ಸುದ್ದಿ

ರೆಬೆಲ್ ಲೀಡರ್ಸ್ ಯತ್ನಾಳ್-ಈಶ್ವರಪ್ಪ ಒಂದಾಗಿ ಹೋರಾಟ!

Share It

ಬಿಜೆಪಿಯಿಂದ ಉಚ್ಛಾಟಿತರಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಮಾಜಿ ಕೇಂದ್ರ ಸಚಿವ, ವಿಜಯಪುರ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಒಟ್ಟಾಗಿ ಹಾವೇರಿಯಲ್ಲಿ ಇದೇ ಏಪ್ರಿಲ್ ತಿಂಗಳ 24 ರಂದು ‘ನ್ಯಾಯ ಜಾಥಾ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಲವ್ ಜಿಹಾದ್ ವಿರುದ್ಧ ಜನಜಾಗೃತಿ ಮೂಡಿಸಲು ನ್ಯಾಯ ಜಾಥಾ ನಡೆಸಲು ಉದ್ದೇಶಿಸಲಾಗಿದೆ. ಈ ನ್ಯಾಯ ಜಾಥಾದಲ್ಲಿ ನೂರಾರು ಹಿಂದೂ ಪರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Share It

You cannot copy content of this page