ದಾವಣಗೆರೆ: ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ 2026-27ನೇ ಸಾಲಿಗೆ ರಾಜ್ಯದ ಎಲ್ಲಾ ಸಮುದಾಯಗಳ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಪಿಯುಸಿ, ಐ.ಟಿ.ಐ, ಡಿಪ್ಲೋಮಾ, ಪದವಿ ಮತ್ತು ಇತರೆ ವೃತ್ತಿ ಶಿಕ್ಷಣ ಕಾಲೇಜುಗಳಲ್ಲಿ 2026-27ರ ಶೈಕ್ಷಣಿಕ ಅವಧಿಯಲ್ಲಿ ಪ್ರವೇಶ ಪಡೆದವರಿಗೆ ಆಯಾ ಕಾಲೇಜುಗಳ ವಾರ್ಷಿಕ ಶುಲ್ಕಕ್ಕೆ ಅನುಗುಣವಾಗಿ ವಿದ್ಯಾರ್ಥಿ ವೇತನ ನೀಡಲಾಗುವುದು. ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶಾಲೆ- ಕಾಲೇಜುಗಳ ಮುಖ್ಯಸ್ಥರ ಪ್ರಮಾಣ ಪತ್ರದ ಜೊತೆ ಅರ್ಜಿ ಸಲ್ಲಿಸಬಹುದು.
ವಿವರಗಳಿಗಾಗಿ ಟ್ರಸ್ಟ್ನ ಅಂತರ್ಜಾಲ ತಾಣ www. ssjanakalyantrust.org ವೀಕ್ಷಿಸಬಹುದು. ಅರ್ಜಿ ಸಲ್ಲಿಸಲು ಜುಲೈ 15 ಕಡೇ ದಿನವಾಗಿದೆ ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

