ತಮ್ಮನ್ನು ಬ್ಲಾಕ್ ಮೇಲರ್ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಟಿ.ಜೆ.ಅಬ್ರಹಾಂ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ ಎಂದು ಟಿ.ಜೆ ಅಬ್ರಹಾಂ ಅವರು ರಾಜ್ಯಪಾಲರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ರಾಜ್ಯಪಾಲರು ಸಿಎಂಗೆ ಶೋಕಾಸ್ ನೋಟಿಸ್ ನೀಡಿದ್ದಾರೆ.
ಟಿ.ಜೆ ಅಬ್ರಹಾಂ ನೀಡಿರುವ ದೂರೇ ಇದೀಗ ಸಿಎಂ ಸಿದ್ದರಾಮಯ್ಯಗೆ ಮಾತ್ರವಲ್ಲ ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಕಂಟಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಟಿ.ಜೆ ಅಬ್ರಹಾಂ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶಗೊಂಡಿದ್ದಾರೆ. ಅದರಲ್ಲೂ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದು, ಟಿ.ಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದೀಗ ಈ ಹೇಳಿಕೆ ವಿರುದ್ಧ ಟಿ.ಜೆ ಅಬ್ರಾಹಂ, ಸಿಎಂ ಸಿದ್ದರಾಮಯ್ಯಗೆ ಲೀಗಲ್ ನೊಟೀಸ್ ನೀಡುವ ಎಚ್ಚರಿಕೆ ನೀಡಿದ್ದಾರೆ.
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ಟಿ.ಜೆ ಅಬ್ರಾಹಂ ದೂರು ನೀಡಿದ್ದು, ಈ ದೂರಿನ ಆಧಾರದ ಮೇಲೆಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಿಎಂಗೆ 7 ದಿನಗಳಲ್ಲಿ ಉತ್ತರಿಸುವಂತೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರಿಂದ ಟಿ.ಜೆ. ಅಬ್ರಾಹಂ ವಿರುದ್ಧ ಕೋಪಗೊಂಡಿರುವ ಸಿಎಂ ಸಿದ್ದರಾಮಯ್ಯ, ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ ಟಿ.ಜೆ ಅಬ್ರಾಹಂ ಬ್ಲಾಕ್ ಮೈಲರ್ ಎಂದಿದ್ದಾರೆ. ಇದರಿಂದ ಕೋಪಗೊಂಡಿರುವ ಟಿ.ಜೆ ಅಬ್ರಹಾಂ, ಹೇಳಿಕೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಲೀಗಲ್ ನೋಟಿಸ್ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಟಿ.ಜೆ ಅಬ್ರಾಹಂ, ಬ್ಲಾಕ್ ಮೈಲರ್ ಎನ್ನುವುದನ್ನು ಬಹಿರಂಗವಾಗಿ ನಿಮ್ಮ ಹೇಳಿಕೆ ವಾಪಸ್ ಪಡೆಯಿರಿ. ಇಲ್ಲದಿದ್ದರೆ ನಿಮ್ಮ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.


